ಭಾನುವಾರ, ಡಿಸೆಂಬರ್ 26, 2010

ವಚನಗಳಲ್ಲಿ ಪ್ರಣವ -3

ಆ ಪರಬ್ರಹ್ಮವೆ ಓಂಕಾರವಪ್ಪ ಪ್ರಣವಸ್ವರೂಪು, ಪರಮಾತ್ಮನೆನಿಸಿ
ಪರಶಿವನಾಮದಿಂ ಪರಶಕ್ತಿಸಂಯುಕ್ತವಾಗಿ,
ಆಕಾರ ಉಕಾರ ಮಕಾರವೆಂಬ ಬೀಜಾಕ್ಷರಂಗಳಿಂ ನಾದಬಿಂದುಕಳೆಯಾಗಿ,
ದಶನಾಡಿ ದಶವಾಯು ದಶವಿಧೇಂದ್ರಿಯ
ಸಪ್ತಧಾತು ಷಡುಚಕ್ರ ಷಡುವರ್ಗ ಪಂಚಭೂತ
ಚತುರಂತಃಕರಣ, ತ್ರಿದೋಷಪ್ರಕೃತಿ,
ತ್ರಯಾವಸ್ಥೆ, ಸತ್ವ ರಜ ತಮ, ಅಂಗ ಪ್ರಾಣ, ಅರಿವು ಭಾವ ಜ್ಞಾನ,
ಮೊದಲಾದ ಬಾಹತ್ತರ ವಿನಿಯೋಗಮಂ ತಿಳಿದು
ಭೂಲೋಕ ಭುವರ್ಲೋಕ ಸ್ವರ್ಲೋಕ ಮಹರ್ಲೋಕ ಜನಲೋಕ
ತಪೋಲೋಕ, ಸತ್ಯಲೋಕ,
ಅತಳ, ವಿತಳ, ಸುತಳ, ಮಹಾತಳ, ರಸಾತಳ, ತಳಾತಳ, ಪಾತಾಳಂಗಳೊಳಗಾದ
ಚತುರ್ದಶಭುವನಂಗಳೊಳಹೊರಗೆ ಅಂತರ್ಗತ ಬಹಿರ್ಗತವಾಗಿ,
ನಾದಮಂ ತೋರಿ ಭರ್ಗೊದೇವನೆಂಬ ನಾಮಮಂ ತಳೆದು
ಊಧ್ರ್ವರೇತುವೆನಿಸಿ,
ವಿಶ್ವತೋಮುಖ, ವಿಶ್ವತಶ್ಚಕ್ಷು, ವಿಶ್ವತೋ ಬಾಹು, ವಿಶ್ವತಃಪಾದದಿಂ
ವಿಶ್ವಗರ್ಭೀಕೃತವಾಗಿ,
ಉತ್ಪತ್ತ್ಯಸ್ಥಿತಿಲಯಂಗಳನೆಣಿಕೆಗೆಯ್ಯದೆ
ದೇವತಾಂತರದಿಂ ಮಾನಸಾಂತರವನನುಕರಿಸಿ,
ಮಾನಸದಲ್ಲಿ ರವಿಕೋಟಿತೇಜದಿಂ ಸಕಲಪಾಪಾಂಧಕೂಪಮಂ ತೊಳೆದು
ಸುರಕ್ಷಿತದಿಂ ಪ[ರಾ] ಪಶ್ಯಂತಿ ಸುಮಧ್ಯ ವೈಖರಿಯೆಂಬ ಚತುವರ್ಿಧದಿಂ
ದುರಿತ ದುರ್ಮದ ಕಾಲಮೂಲಾದಿಮೂಲಮಂ ಬಗೆಗೊಳ್ಳದೆ,
ಚಿತ್ಸುಧಾಮೃತವೆ ಅಂಗವಾಗಿ
ಚಿದರ್ಕಪ್ರಭಾಕರವೆ ಪ್ರಾಣವಾಗಿ,
ಸೌರಾಷ್ಟ್ರ ಸೋಮೇಶ್ವರನಿಂತಿಂತು ಕರ್ತನು-ಭರ್ತನು ತಾನೆ ಆಗಿ,
ಪರಮಸ್ವಯಂಭೂ ಸ್ವತಃಸಿದ್ಧದಿಂ ಸಚ್ಚಿದಾನಂದಸ್ವರೂಪದಿಂ
ನಿತ್ಯಪರಿಪೂರ್ಣತ್ವದಿಂದೆಡದೆರಹಿಲ್ಲದಿರ್ಪನಯ್ಯಾ.
................

೫. ಜೀವಭಾವದ ಹಂಸ ಜಪದಲ್ಲಿ ದ್ವಾದಶಾಂತ ಕೂಡಿ ಶಿವಜಪವಾಯಿತ್ತು.
ಆ ಶಿವಜಪದಲ್ಲಿಯೇ ಪ್ರಣವವಡಕವಾಗಿಪ್ಪುದು.
ಇದಕ್ಕೆ ಶ್ರುತಿ:
`ತದ್ಯೋ ಹಂಸಃ ಸೋಹಂ ಯೋಸೌಸೋಹಂ'
ಆ ಪ್ರಣವದ ನಿರಾಳದಾದಿಬಿಂದು,
ಆ ಬಿಂದುವಿನ ಸ್ವಯಂಪ್ರಕಾಶಲಿಂಗವೇ ತಾವಾಗಿಪ್ಪರಯ್ಯಾ,
ಸೌರಾಷ್ಟ್ರ ಸೋಮೇಶ್ವರಾ ನಿಮ್ಮ ಶರಣರು.

                                                             ...............ಆದಯ್ಯ



ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ