ಮಂಗಳವಾರ, ಮಾರ್ಚ್ 04, 2014

ಮರ ಗಿಡು ಬಳ್ಳಿ ಧಾನ್ಯಂಗಳ ತರಿತರಿದು ಪ್ರಾಣವ ಕೊಂದುಂಡು,

ಮರ ಗಿಡ ಬಳ್ಳಿಗಳ ಜೀವದ ಬಗ್ಗೆ ಮಾತಾಡುವ ಈ ವಚನ ವಿಶೇಷ ಅನ್ನಿಸ್ತು! 

ಮರ ಗಿಡು ಬಳ್ಳಿ ಧಾನ್ಯಂಗಳ ಬೆಳಸೆಲ್ಲವ ತರಿತರಿದು
ಪ್ರಾಣವ ಕೊಂದುಂಡು, ಶರೀರವ ಹೊರೆವ ದೋಷಕ್ಕೆ
ಇನ್ನಾವುದು ವಿದ್ಥಿಯಯ್ಯಾ
ಒಂದಿಂದ್ರಿಯ ಮೊದಲಾಗಿ ಐದಿಂದ್ರಿಯ ಕಡೆಯಾದ
ಜೀವಜಾಲದಲ್ಲಿದೆ ಚರಾಚರವೆಲ್ಲ.
ಅದು ಕಾರಣ,
ಕೂಡಲಸಂಗನ ಶರಣರು ಲಿಂಗಕ್ಕರ್ಪಿಸಿ ಪ್ರಸಾದವ ಕೊಂಡು
ನಿರ್ದೋಷಿಗಳಾಗಿ ಬದುಕಿದರು.


... ಬಸವಣ್ಣ 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ