ದೇಹಭಾವವಳಿದಲ್ಲದೆ ಜೀವ ಭಾವವಳಿಯದು
ಜೀವ ಭಾವವಳಿದಲ್ಲದೆ ಭಕ್ತಿ ಭಾವವಳವಡದು
ಅರಿವು ತಲೆದೋರಿದಲ್ಲದೆ ಕುರುಹು ನಷ್ಟವಾಗದು
ಕುರುಹು ನಷ್ಟವಾಗಲ್ಲದೆ ಮಾಯೆ ಹಿಂಗದು
ಇದು ಕಾರಣ ಕಾಯದ ಜೀವದ ಹೊಲಿಗೆ ಅಳಿದ ಭೇಧವ ತಿಳಿಯಬಲ್ಲರೆ
ಗುಹೇಶ್ವರಲಿಂಗದ ಅರಿವು ಸಾಧ್ಯಬಹುದು ಸಿದ್ದರಾಮಯ್ಯ
..................ಅಲ್ಲಮ ಪ್ರಭು
http://www.raaga.com/player4/?id=72720&mode=100&rand=0.4384112348780036
.......................
ಬಯಲು ಲೇಬಲ್ನೊಂದಿಗೆ ಪೋಸ್ಟ್ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್ಗಳನ್ನು ತೋರಿಸಿ
ಬಯಲು ಲೇಬಲ್ನೊಂದಿಗೆ ಪೋಸ್ಟ್ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್ಗಳನ್ನು ತೋರಿಸಿ
ಭಾನುವಾರ, ಜುಲೈ 18, 2010
ಕುರುಹಳಿದು.. ಅರಿವರಿದು!
ಲೇಬಲ್ಗಳು:
ಅಲ್ಲಮ,
ಅಲ್ಲಮ ಪ್ರಭು,
ಕುರುಹು,
ಬಯಲು,
allama prabhu vachana,
bayalu,
kuruhu
ಗುರುವಾರ, ನವೆಂಬರ್ 19, 2009
ತೊಟ್ಟಿಲು ಮುರಿದು ನೇಣು ಹರಿದು ಜೋಗುಳ ನಿಂತಲ್ಲದೆ!
ತುಂಬಾ ಹಿಂದೆ .. ಬಹುಶ ನಾಲ್ಕಾರು ತಿಂಗಳಾಗಿರಬಹುದು .. ಆಕಾಶವಾಣಿಯಲ್ಲಿ ಬೆಳಿಗ್ಗೆ ಪ್ರಸಾರವಾಗ್ತಾ ಇದ್ದ ಈ ಕಾರ್ಯಕ್ರಮವನ್ನು ರೆಕಾರ್ಡ್ ಮಾಡಿದ್ದೆ. ನಂತರ ಯಾವಾಗಲೋ ಅದನ್ನು ಕಂಪ್ಯೂಟರ್ ಗೆ ಕಾಪಿ ಮಾಡಿದ್ದೆ. ನನ್ನ ಮೊಬೈಲ್ ನಿಂದ ಇದು ಎಗರಿ ಹೋಗಿತ್ತು.
ಇಂದು ನನ್ನ ಕಂಪ್ಯೂಟರ್ ಅನ್ನು ತಡಕಾಡ್ತಾ ಇದ್ದಾಗ, ಆಕಸ್ಮಿಕವಾಗಿ ಈ ಕ್ಲಿಪ್ ಸಿಕ್ತು.
ಅಲ್ಲಮ ಪ್ರಭುಗಳ ವಚನಗಳು ನನಗೆ ತುಂಬಾ ಇಷ್ಟ. ಪರಮ ಅನುಭಾವದ ಮಾತುಗಳು ಅಲ್ಲಮನ ವಚನಗಳು.
ಈ clip ನ ವಚನಗಳು ಒಂದಕ್ಕಿಂತ ಒಂದು ಚೆಂದ. ಅದರಲ್ಲೂ ಕೊನೆಯ (ಕೆಳಗಿನ) ವಚನ ತುಂಬಾ ಹಿಡಿಸಿತು.
ಅಜ್ಞಾನವೆಂಬ ತೊಟ್ಟಿಲ ಒಳಗೆ ಜ್ಞಾನವೆಂಬ ಶಿಶುವ ಮಲಗಿಸಿ
ಸಕಲ ವೇದ ಶಾಸ್ತ್ರವೆಂಬ ನೇಣ ಕಟ್ಟಿ ಹಿಡಿದು ತೂಗಿ
ತಾ ಉಣಬಡುತ್ತಿದ್ದಾಳೆ ಭ್ರಾಂತಿಯೆಂಬ ತಾಯಿ
ತೊಟ್ಟಿಲು ಮುರಿದು ನೇಣು ಹರಿದು ಜೋಗುಳ ನಿಂತಲ್ಲದೆ
ಗುಹೆಶ್ವರಲಿಂಗನ ಕಾಣಬಾರದು.
ಇಂದು ನನ್ನ ಕಂಪ್ಯೂಟರ್ ಅನ್ನು ತಡಕಾಡ್ತಾ ಇದ್ದಾಗ, ಆಕಸ್ಮಿಕವಾಗಿ ಈ ಕ್ಲಿಪ್ ಸಿಕ್ತು.
ಅಲ್ಲಮ ಪ್ರಭುಗಳ ವಚನಗಳು ನನಗೆ ತುಂಬಾ ಇಷ್ಟ. ಪರಮ ಅನುಭಾವದ ಮಾತುಗಳು ಅಲ್ಲಮನ ವಚನಗಳು.
ಈ clip ನ ವಚನಗಳು ಒಂದಕ್ಕಿಂತ ಒಂದು ಚೆಂದ. ಅದರಲ್ಲೂ ಕೊನೆಯ (ಕೆಳಗಿನ) ವಚನ ತುಂಬಾ ಹಿಡಿಸಿತು.
|
ಅಜ್ಞಾನವೆಂಬ ತೊಟ್ಟಿಲ ಒಳಗೆ ಜ್ಞಾನವೆಂಬ ಶಿಶುವ ಮಲಗಿಸಿ
ಸಕಲ ವೇದ ಶಾಸ್ತ್ರವೆಂಬ ನೇಣ ಕಟ್ಟಿ ಹಿಡಿದು ತೂಗಿ
ತಾ ಉಣಬಡುತ್ತಿದ್ದಾಳೆ ಭ್ರಾಂತಿಯೆಂಬ ತಾಯಿ
ತೊಟ್ಟಿಲು ಮುರಿದು ನೇಣು ಹರಿದು ಜೋಗುಳ ನಿಂತಲ್ಲದೆ
ಗುಹೆಶ್ವರಲಿಂಗನ ಕಾಣಬಾರದು.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)